ಬಿಜೆಪಿ ಟಿಪ್ಪು ಬಗ್ಗೆ ತೆಗೆದುಕೊಂಡ ನಿರ್ಣಯ ಖಂಡನಾರ್ಹ- ಎಚ್.ಕೆ.ಪಾಟೀಲ್

ಗುರುವಾರ, 31 ಅಕ್ಟೋಬರ್ 2019 (09:04 IST)
ಧಾರವಾಡ : ಶಾಲಾ ಪಠ್ಯ ಪುಸ್ತಕದಿಂದ ಟಿಪ್ಪು ಪಠ್ಯವನ್ನು ತೆಗೆಯುವ ವಿಚಾರಕ್ಕೆ ರಾಜಕೀಯ ಕಾರಣಕ್ಕಾಗಿ ಬಿಜೆಪಿ ಟಿಪ್ಪು ಬಗ್ಗೆ ತೆಗೆದುಕೊಂಡ ನಿರ್ಣಯ ಖಂಡನಾರ್ಹ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.




ಟಿಪ್ಪು ಇತಿಹಾಸ ಬಹುದೊಡ್ಡದು. ತನ್ನದೆಯಾದ ನಾಡು ಕಟ್ಟಿ ಬೆಳೆಸುವಾಗ ಕೆಲ ವಿವಾದಗಳು ಆಗಿರಬಹುದು. ಆದರೆ ರಾಜಕೀಯ ಕಾರಣಕ್ಕಾಗಿ ಬಿಜೆಪಿ ಟಿಪ್ಪು ಬಗ್ಗೆ ತೆಗೆದುಕೊಂಡ ನಿರ್ಣಯ ಖಂಡನಾರ್ಹ. ಬಿಜೆಪಿ ಸರ್ಕಾರ ಈ ರೀತಿ ವಿವಾದಾತ್ಮಕ ನಿರ್ಣಯ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ಕೇವಲ ರಾಜಕೀಯ ಮಾತ್ರ ಇವರ ಚಿಂತನೆ ಆಗಬಾರದು. ಟಿಪ್ಪು ಬಗ್ಗೆ ಓದಿಕೊಳ್ಳಬೇಕು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.


ಹಾಗೇ ಚಿನ್ನದ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಇದು ಸ್ವಾಗತಾರ್ಹ ನಿರ್ಧಾರ. ಚಿನ್ನ, ಬೆಳ್ಳಿ ಯಾವುದೇ ಇರಲಿ ಅಕ್ರಮವಾಗಿ ಹೊಂದಲೇಬಾರದು ಎಂದು ಹೇಳಿದ್ದಾರೆ.    

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ