ಮೀಸಲಾತಿ ಘೋಷಣೆ ಮಕ್ಕಳ ಆಟಿಕೆಯಾಗಿದೆ

ಸೋಮವಾರ, 27 ಮಾರ್ಚ್ 2023 (18:31 IST)
ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಯಶಸ್ವಿ ಹಿನ್ನೆಲೆ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಮಾಧ್ಯಮಗೋಷ್ಠಿ ನಡೆಸಿದರು. ಈ ವೇಳೆ ಮೀಸಲಾತಿ ಘೋಷಣೆ ಮಕ್ಕಳ ಆಟಿಕೆಯಂತೆ ಆಗಿದೆ. ರಾಜ್ಯ ಸರ್ಕಾರ ಯಾವ ಆಧಾರದಲ್ಲಿ ಮೀಸಲಾತಿ ಘೋಷಣೆ ಮಾಡಿದೆ. ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ? ಯಾರ ಸಲಹೆ ಪಡೆದು ಮೀಸಲಾತಿ ಘೋಷಣೆ ಮಾಡಿದ್ದೀರಾ? ಹಾಗೂ ಸಮಾಜವನ್ನು ಒಡೆಯುವ ಸಲುವಾಗಿ ಮುಸ್ಲಿಮರ ಮೀಸಲಾತಿ ಕಡಿತ ಮಾಡಿ ಬೇರೆ ಸಮುದಾಯಕ್ಕೆ ಹಂಚಿದ್ದಾರೆ. ಈ ಮೂಲಕ ಹಿಂದೂ ಮುಸ್ಲಿಮರ ಮಧ್ಯೆ ಸಂಘರ್ಷ ಹುಟ್ಟುಹಾಕಲು, ಬೆಂಕಿ ಹಚ್ಚಲು ಈ ರೀತಿ ಮಾಡಿದ್ದಾರೆ. ಎಂದು ಮೀಸಲಾತಿ ವಿಚಾರದಲ್ಲಿ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ HDK ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ