ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹ
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಸಾವಿಗೆ ಸರ್ಕಾರವೇ ನೇರ ಹೊಣೆ. ಸಂತೋಷ್ ಮಾಡಿಸಿರುವ ಕಾಮಗಾರಿ ಮೊತ್ತವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು.
ಸಂತೋಷ್ ಕುಟುಂಬಕ್ಕೆ 2 ಕೋಟಿ ಪರಿಹಾರ ಕೊಡ್ಬೇಕು. ನೀರಾವರಿ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಬಿಬಿಎಂಪಿಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೀತಿದೆ. ಸದ್ಯದಲ್ಲೇ ಸಚಿವರು ಹಾಗೂ ಶಾಸಕರ ಪಟ್ಟಿ ಬಿಡುಗಡೆ ಮಾಡೋದಾಗಿ ತಿಳಿಸಿದ್ದಾರೆ.