ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹ

ಗುರುವಾರ, 14 ಏಪ್ರಿಲ್ 2022 (06:07 IST)
ಬೆಂಗಳೂರು : ಸಂತೋಷ್ ಪಾಟೀಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಇಲ್ಲವಾದಲ್ಲಿ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಸಾವಿಗೆ ಸರ್ಕಾರವೇ ನೇರ ಹೊಣೆ. ಸಂತೋಷ್ ಮಾಡಿಸಿರುವ ಕಾಮಗಾರಿ ಮೊತ್ತವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು.

ಸಂತೋಷ್ ಕುಟುಂಬಕ್ಕೆ 2 ಕೋಟಿ ಪರಿಹಾರ ಕೊಡ್ಬೇಕು. ನೀರಾವರಿ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಬಿಬಿಎಂಪಿಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೀತಿದೆ. ಸದ್ಯದಲ್ಲೇ ಸಚಿವರು ಹಾಗೂ ಶಾಸಕರ ಪಟ್ಟಿ ಬಿಡುಗಡೆ ಮಾಡೋದಾಗಿ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ