ಮಂತ್ರಾಲಯದ ಮೂರನೇ ಮಹಡಿಯಿಂದ ಹಾರಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್

Sampriya

ಶುಕ್ರವಾರ, 4 ಅಕ್ಟೋಬರ್ 2024 (15:37 IST)
Photo Courtesy X
ಮಹಾರಾಷ್ಟ್ರ:  ಡೆಪ್ಯುಟಿ ಸ್ಪೀಕರ್ ನರಹರಿ ಜಿರ್ವಾಲ್ ಮತ್ತು ಕನಿಷ್ಠ ಇಬ್ಬರು ಬುಡಕಟ್ಟು ಶಾಸಕರು ಶುಕ್ರವಾರ ಮಧ್ಯಾಹ್ನ ಮಂತ್ರಾಲಯ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ.

ಪಿಟಿಐ ವರದಿ ಮಾಡಿದಂತೆ, ಜಿರ್ವಾಲ್ ಮತ್ತು ಇತರರು ಧಂಗರ್ ಸಮುದಾಯವನ್ನು ಆದಿವಾಸಿಗಳ ಕೋಟಾದಲ್ಲಿ ಸೇರಿಸುವುದರ ವಿರುದ್ಧ ಪ್ರತಿಭಟಿಸಿದರು. ಈ ವೇಳೆ ಘಟನೆ ನಡೆದಿದೆ.

ಘಟನೆಯಲ್ಲಿ ಯಾವುದೇ ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಪಶ್ಚಿಮ ಮಹಾರಾಷ್ಟ್ರ ಮತ್ತು ಮರಾಠವಾಡ ಪ್ರದೇಶದ ಕುರುಬ ಸಮುದಾಯದ ಧಂಗಾರ್‌ಗಳು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಸೆಪ್ಟೆಂಬರ್‌ನಲ್ಲಿ, ಯಶವಂತ್ ಸೇನೆಯ ಮುಖ್ಯಸ್ಥ ಮಾಧವ್ ಭಾವು ಗಡೆ, "ಧಂಗರ್ ಮೀಸಲಾತಿ ಮತ್ತು ನಮ್ಮ ಇತರ ಬೇಡಿಕೆಗಳನ್ನು ಅರ್ಥಮಾಡಿಕೊಳ್ಳಲು ಮುಖ್ಯಮಂತ್ರಿಗೆ ಸಮಯವಿಲ್ಲದಿದ್ದರೆ, ನಮಗೆ ಅವರ ಅಗತ್ಯವಿಲ್ಲ" ಎಂದು ಹೇಳಿದರು.

ಇದಕ್ಕೂ ಮೊದಲು ಸೆಪ್ಟೆಂಬರ್ 30 ರಂದು, ಮಹಾರಾಷ್ಟ್ರ ಸರ್ಕಾರವು ಧನಗರ್‌ಗಳನ್ನು ಎಸ್‌ಟಿ ವರ್ಗಕ್ಕೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ನೂರಾರು ಆದಿವಾಸಿಗಳು ಸೋಮವಾರ ಗೊಂಡಿಯಾ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಧನಗರ್ (ಕುರುಬರು) ಬುಡಕಟ್ಟು ಜನಾಂಗದವರಲ್ಲ, ಅವರನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಯಾವುದೇ ಪ್ರಯತ್ನದಿಂದ ಆದಿವಾಸಿಗಳಿಗೆ ಅನ್ಯಾಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

'ಧಂಗರ್' ಮತ್ತು 'ಧಂಗಡ್' ಒಂದೇ ಸಮುದಾಯದ ವಿಭಿನ್ನ ಹೆಸರುಗಳು ಎಂಬುದನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಿದೆ ಎಂದು ರಾಜ್ಯ ಸಚಿವ ಶಂಭುರಾಜ್ ದೇಸಾಯಿ ಇತ್ತೀಚೆಗೆ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ