ಬಿಜೆಪಿಯಲ್ಲಿರುವ ಭಿನ್ನಮತ ಶೀಘ್ರವೇ ಶಮನ: ಜನಾರ್ದನ ರೆಡ್ಡಿ

ಶುಕ್ರವಾರ, 5 ಮೇ 2017 (12:45 IST)
ರಾಜ್ಯ ಬಿಜೆಪಿಯಲ್ಲಿರುವ ಭಿನ್ನಮತ ಶೀಘ್ರವೇ ಶಮನವಾಗುವ ವಿಶ್ವಾಸವಿದೆ. ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
 
ಪಕ್ಷದ ಹೈಕಮಾಂಡ್ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಪಕ್ಷವನ್ನು ಗೆಲ್ಲಿಸುವುದು ನಮ್ಮ ಗುರಿಯಾಗಲಿದೆ ಎಂದು ತಿಳಿಸಿದ್ದಾರೆ. 
 
ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಕೋಲಾರ ಜಿಲ್ಲೆಯ ನೀರಿನ ಸಮಸ್ಯೆಯನ್ನು ನಿವಾರಿಸುತ್ತೇವೆ. ಜಿಲ್ಲೆಯಲ್ಲಿರುವ ಕೆರೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಇತರ ಜಲಸಂಪನ್ಮೂಲವನ್ನು ಕ್ರೂಢೀಕರಿಸಲಾಗುವುದು ಎಂದರು. 
 
ಕೋಲಾರ ಜಿಲ್ಲೆಯ ಭಾಗದಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ