ಚೆನ್ನಾಗಿದ್ದೀರಿ, ಹೋಗಿಬನ್ನಿ ಎಂದ ವೈದ್ಯರು

ಶುಕ್ರವಾರ, 2 ಡಿಸೆಂಬರ್ 2022 (20:05 IST)
ಅನಾರೋಗ್ಯ ಸಮಸ್ಯೆಯಾಗಿ ಮೈನರ್ ಶಸ್ತ್ರಚಿಕಿತ್ಸೆ  ಅಗತ್ಯವಿದೆ ಎಂಬ ವೈದ್ಯರ ಅಭಿಪ್ರಾಯದ ಮೇರೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್​ಎಎಲ್​ ಏರ್​ಪೋರ್ಟ್​ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಅವರ ಆರೋಗ್ಯ ಪರಿಶೀಲಿಸಿದ ವೈದ್ಯರು, ‘ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ’ ಎಂದು ಅಭಿಪ್ರಾಯಪಟ್ಟು ವಿಶ್ರಾಂತಿಗೆ ಸಲಹೆ ನೀಡಿ ಮನೆಗೆ ಕಳಿಸಿದರು. ಇದಕ್ಕೂ ಮೊದಲು ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರಿಗೆ ಸಣ್ಣ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದ ವೈದ್ಯರು ನಾಲ್ಕು ದಿನಗಳ ವಿಶ್ರಾಂತಿಗೆ ಸಲಹೆ ಮಾಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ