ದೇಶದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ಇದೆ ಎಂದ ಮಾಜಿ ಸಚಿವ

ಬುಧವಾರ, 29 ಆಗಸ್ಟ್ 2018 (20:30 IST)
ಭಾರತದಲ್ಲಿ ಕರಾಳ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದೆ. ಹೀಗಂತ ಕೇಂದ್ರದ ಮಾಜಿ ಸಚಿವ ಆರೋಪಿಸಿದ್ದಾರೆ.

ದೇಶದಲ್ಲಿ ಪರೋಕ್ಷ ತುರ್ತು ಪರಿಸ್ಥಿತಿಯ ಅನುಭವ ಆಗುತ್ತಿದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಡಳಿತ ವ್ಯವಸ್ಥೆ ಹಾಗೂ ಅಧಿಕಾರಸ್ಥರನ್ನು ವಿರೋಧ ಮಾಡುವವರ ಧ್ವನಿಯನ್ನು ವ್ಯವಸ್ಥಿತವಾಗಿ ದಮನ ಮಾಡಲಾಗುತ್ತಿದೆ. ಇಡೀ ದೇಶವನ್ನು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ನಡೆಸುತ್ತಿದ್ದಾರೆ. ಉಳಿದ ನಾಯಕರು ಲೆಕಕ್ಕೆ ಇಲ್ಲದಂತಾಗಿದೆ ಎಂದು ದೂರಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ