ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ ಶ್ರೀಗಳ ಅಂತ್ಯ ಸಂಸ್ಕಾರ

ಭಾನುವಾರ, 29 ಡಿಸೆಂಬರ್ 2019 (10:57 IST)
ಉಡುಪಿ : ಪೇಜಾವರ ಶ್ರೀಗಳು ವಿಧಿವಶರಾದ ಹಿನ್ನಲೆಯಲ್ಲಿ ಅವರ  ಅಂತ್ಯ ಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ.



ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ಶ್ರೀಗಳು ಇಂದು ಕೊನೆಯುಸಿರೆಳೆದಿದ್ದು, ಅವರ ಪಾರ್ಥಿವ ಶರೀರವನ್ನು ಕೃಷ್ಣ ಮಠಕ್ಕೆ ಶಿಫ್ಟ್ ಮಾಡಲಾಗಿದ್ದು, ಅಲ್ಲಿ ಮಧ್ವ ಸರೋವರದಲ್ಲಿ  ಸ್ನಾನ ಮಾಡಿಸಿ, ಬಳಿಕ ಕನಕನ ಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿಸಿ ನಂತರ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಪಾರ್ಥಿವ ಶರೀರವನ್ನು ಭಕ್ತರ ದರ್ಶನಕ್ಕೆ ಇಡಲಾಗುವುದು.


ಬಳಿಕ ಸೇನಾ ಹೆಲಿಕಾಪ್ಟರ್  ಮೂಲಕ ಬೆಂಗಳೂರಿಗೆ ರವಾನಿಸಿ ಅಲ್ಲಿ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಮತ್ತೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು.  ಕೊನೆಗೆ ವಿದ್ಯಾಪೀಠದಲ್ಲಿ ಸರ್ಕಾರದ ಸಕಲ ಗೌರವದೊಂದಿಗೆ ಶ್ರೀಗಳ ಬೃಂದಾವನ ಮಾಡಲಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ