ಬಿಎಸ್‌ವೈ ಪ್ರಕರಣಗಳ ಮೇಲ್ಮನವಿಗೆ ಸರಕಾರ ತೀರ್ಮಾನ: ಟಿ.ಬಿ.ಜಯಚಂದ್ರ

ಮಂಗಳವಾರ, 28 ಫೆಬ್ರವರಿ 2017 (13:01 IST)
ಬಿಎಸ್‌ವೈ ಪ್ರಕರಣಗಳ ಮೇಲ್ಮನವಿ ವಿಚಾರಕ್ಕೂ ಡೈರಿ ಪ್ರಕರಣಕ್ಕೂ ಮೇಲ್ಮನವಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ಬಿಎಸ್‌ವೈ ಪ್ರಕರಣವನ್ನು ಹೈಕೋರ್ಟ್ ವಜಾ ಮಾಡಿತ್ತು.ಹೈಕೋರ್ಟ್ ಪ್ರಕರಣವನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಸರಕಾರ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
 
ಆದರೆ, ಅದು ಖಾಸಗಿ ದೂರು. ಸಿಎಜಿ ವರದಿ ಬಂದ ನಂತರ ಮೇಲ್ಮನವಿ ಸಲ್ಲಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಮಾಹಿತಿ ನೀಡಿದ್ದಾರೆ.
 
ಡೈರಿ ಪ್ರಕರಣವನ್ನು ಬಹಿರಂಗಗೊಳಿಸಿದ್ದರಿಂದ ರಾಜಕೀಯ ಸೇಡು ತೀರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಯಡಿಯೂರಪ್ಪ ಪ್ರಕರಣಗಳಿಗೆ ಮರು ಜೀವ ನೀಡಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ