ಸರಕಾರಕ್ಕೆ ವೀರಶೈವ ಲಿಂಗಾಯತ ಸಂಘಟನೆ ಎಚ್ಚರಿಕೆ

ಮಂಗಳವಾರ, 30 ಏಪ್ರಿಲ್ 2019 (18:51 IST)
ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ, ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರ ಅಳವಡಿಸದೇ ಅಗೌರವ ತೋರಲಾಗಿದೆ. ಮೇ 7 ರ ಬಸವೇಶ್ವರ ಜಯಂತಿ ಒಳಗಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭಾವಚಿತ್ರ ಅಳವಡಿಸಬೇಕು ಎಂದರು.

ರಾಜ್ಯ ಸರ್ಕಾರ 2 ವರ್ಷಗಳ ಹಿಂದೆ ಬಸವೇಶ್ವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸುವ ಕುರಿತು ಆದೇಶ ಹೊರಡಿತ್ತು. ಆದ್ರೆ ಸರ್ಕಾರದ ಆದೇಶ ಪಾಲನೆ ಆಗ್ತಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಬಸವೇಶ್ವರ ಭಾವಚಿತ್ರ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಳವಡಿಸಲೇಬೇಕು ಎಂದು ರಾಜ್ಯ ಸರ್ಕಾರಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರ ಬಸವೇಶ್ವರ ಭಾವಚಿತ್ರ ಕಡ್ಡಾಯವಾಗಿ ಹಾಕಿಲಿಲ್ಲವಾದ್ರೆ ಪ್ರತಿಭಟನೆ ನಡೆಸ್ತೇವೆ. ರಾಜ್ಯದ ಎಲ್ಲಾ ಬಸವೇಶ್ವರ ಪ್ರತಿಮೆ ಮುಂಭಾಗ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದ್ರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ