ಸರ್ಕಾರಿ ಕಾರ್ಯಕ್ರಮ ಸ್ವಂತ ಹಣದಲ್ಲಿ ಮಾಡಬೇಕಾ- ಸಿದ್ದರಾಮಯ್ಯ ಪ್ರಶ್ನೆ

ಶುಕ್ರವಾರ, 5 ಜನವರಿ 2018 (09:21 IST)

ಸರ್ಕಾರಿ ಕಾರ್ಯಕ್ರಮಗಳನ್ನು ಸರ್ಕಾರದ ಹಣದಲ್ಲಿ ಮಾಡದೇ, ಸ್ವಂತ ಹಣದಲ್ಲಿ ಮಾಡಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ದೇವೇಗೌಡ ಹಾಗೂ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ, ಸಮಾವೇಶ ಮಾಡಿರಲಿಲ್ಲವೇ ಎಂದು ಕೇಳಿದ್ದಾರೆ.

ಎತ್ತಿನಹೊಳೆ ಯೋಜನೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಕಾರಿಗಳನ್ನು ಜೈಲಿಗೆ ಕಳಿಸುವೆ ಎಂದಿರುವ ಕುಮಾರಸ್ವಾಮಿ ಅವರ ಪಕ್ಷ ಅಧಿಕಾರಕ್ಕೆ ಬರಲ್ಲ, ಅವರು ಮುಖ್ಯಮಂತ್ರಿಯೂ ಆಗಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ