ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಪತಿ!

ಮಂಗಳವಾರ, 28 ಮಾರ್ಚ್ 2023 (08:50 IST)
ಚಾಮರಾಜನಗರ : ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಕೊಲೆಯಾದ ಘಟನೆ ಚಾಮರಾಜನಗರ ತಾಲೋಕು ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ.
 
ಎಂ.ಸಿ.ಸೌಮ್ಯ (27) ಕೊಲೆಯಾದ ಮಹಿಳೆ. ಏಳು ವರ್ಷಗಳ ಹಿಂದೆ ಸೌಮ್ಯಳನ್ನು ವಿವಾಹವಾಗಿದ್ದ ಮಹೇಶ್ ಚಂದ್ರಗುರು ಪರಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದ ಸೌಮ್ಯಾ, ಪತಿಯನ್ನು ಪ್ರಶ್ನೆ ಮಾಡಿದ್ದಾರೆ. 

ಪತ್ನಿ ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡ ಮಹೇಶ್ ಚಂದ್ರಗುರು, ಸೌಮ್ಯಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಪತಿ ಮಹೇಶ್ ಚಂದ್ರಗುರುವನ್ನು ಪೊಲೀಸರು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ