ಈ ಬಾರಿ ಮತದಾನ ಮಾಡುವ ಅವಕಾಶ ಜನಾರ್ದನ ರೆಡ್ಡಿಗಿಲ್ಲ. ಕಾರಣವೇನು ಗೊತ್ತಾ?

ಮಂಗಳವಾರ, 23 ಏಪ್ರಿಲ್ 2019 (10:01 IST)
ಬಳ್ಳಾರಿ : ಈ ಬಾರಿಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಸಚಿವ, ಜನಾರ್ದನ ರೆಡ್ಡಿ ಅವರು ಮತದಾನ ಮಾಡುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ.


ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಎಂಟ್ರಿ ಮಾಡದಂತೆ ಕೋರ್ಟ್ ಷರತ್ತು ವಿಧಿಸಿತ್ತು. ಈ ಮಧ್ಯೆ ರೆಡ್ಡಿ ಮತದಾನ ಮಾಡಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ರೆಡ್ಡಿ ಮನವಿಯನ್ನು ಅಂಗೀಕರಿಸಲಿಲ್ಲ.


ಅಲ್ಲದೇ ಜನಾರ್ದನರೆಡ್ಡಿ ಗದಗ್‍ನಲ್ಲಿ ಮತದಾನಕ್ಕೆ ನೋಂದಣಿ ಮಾಡಿಸಿರುವುದು ಕೂಡ ರದ್ದಾಗಿದೆ. ಹೀಗಾಗಿ ಅವರು ಈ ಬಾರಿ ಮತದಾನ ಮಾಡುವುದಿಲ್ಲ ಎನ್ನಲಾಗಿದೆ. ಜನಾರ್ದನರೆಡ್ಡಿ ಪತ್ನಿ, ಮಗ ಹಾಗೂ ಕುಟುಂಬಸ್ಥರು ಇಂದು ಬಳ್ಳಾರಿಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ