ರಾಜ್ಯದಲ್ಲಿ ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ....!

geetha

ಗುರುವಾರ, 18 ಜನವರಿ 2024 (14:22 IST)
ಬೆಂಗಳೂರು-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರ ಮುಷ್ಕರ ನಡೆಯುತ್ತಿದೆ.ಕೇಂದ್ರ ಸರ್ಕಾರದ ಹಿಟ್ ಆ್ಯಂಡ್ ರನ್ ಕಾಯ್ದೆ ಭಾರೀ ವಿರೋಧ ವ್ಯಕ್ತವಾಗಿದ್ದು,ನಿನ್ನೆ ಮಧ್ಯರಾತ್ರಿ ಯಿಂದ ಲಾರಿ ಸಂಚಾರ ಸ್ಥಗಿತಗೊಳಿಸಿ ಲಾರಿ ಮಾಲೀಕರು ಹೋರಾಟ ಮಾಡ್ತಿದ್ದಾರೆ.ಅಗತ್ಯ ಸೇವೆ ಹೊರತುಪಡಿಸಿ ವಾಣಿಜ್ಯ ಸೇವೆಯ ಲಾರಿಗಳ ಸಂಚಾರ ಸ್ಥಗಿತವಾಗಿದೆ.ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸು ಆಗುವರಿಗೂ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿಂತಲ್ಲೇ ಕೆಲ ಲಾರಿಗಳು ನಿಂತಿದೆ.ರಾಜ್ಯದಲ್ಲಿ ಚನ್ನಾರೆಡ್ಡಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.
 
ಚನ್ನಾರೆಡ್ಡಿ ಕರ್ನಾಟಕ ರಾಜ್ಯದ ಲಾರಿ ಮಾಲೀಕರ ಸಂಘದ ಅಧ್ಯಕ್ಷರಾಗಿದ್ದು,ರಾಜ್ಯದಲ್ಲಿ ಲಾರಿ ಮಾಲೀಕರ ಹೋರಾಟಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಷಣ್ಮುಗಪ್ಪ ನೇತೃತ್ವದಿಂದ ಲಾರಿ ಸಂಚಾರ ಯಥಾಸ್ಥಿತಿ ಇದೆ.ನಿನ್ನೆಯಿಂದ ನಡೆಯುತ್ತಿರುವ ಲಾರಿ ಮುಷ್ಕರಕ್ಕೆ ಷಣ್ಮುಗಪ್ಪ  ಅವರಿಂದ ಬೆಂಬಲ ಇಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ