ಬಿಜೆಪಿ ಕಿರುಕುಳಕ್ಕೆ ಬೇಸತ್ತ ಮಲ್ಲಮ್ಮ ಕಾಂಗ್ರೆಸ್ ಸೇರಿದ್ದಾರೆ– ಸಿಎಂ

ಭಾನುವಾರ, 17 ಡಿಸೆಂಬರ್ 2017 (14:20 IST)
ಬಿಜೆಪಿಯವರ ಕಿರುಕುಳದಿಂದ ಬೇಸತ್ತು ದಿವಂಗತ ಯೋಗೀಶಗೌಡ ಅವರ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಕಿರುಕುಳ ಹೆಚ್ಚಾಗಿದ್ದರಿಂದ ಮಲ್ಲಮ್ಮ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಮಲ್ಲಮ್ಮ ಅವರನ್ನು ಕಾಂಗ್ರೆಸ್ ಹೈಜಾಕ್ ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಸಂಬದ್ದ ಪದ ಬಳಕೆ ಮಾಡಿರುವ ಯಡಿಯೂರಪ್ಪ ಅವರಿಗೆ ಬಹಿರಂಗ ಚರ್ಚೆಗೆ ಬರಲು ತಾಕತ್ತಿಲ್ಲ ಎಂದು ದೂರಿದ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಅವರು ಅಧ್ಯಕ್ಷ ಸ್ಥಾನವನ್ನುತೊರೆದಿದ್ದಾರೆ. ಸಕ್ರೀಯ ರಾಜಕಾರಣದಲ್ಲಿ ಮುಂದುವರೆಯಲಿದ್ದು, ರಾಯಬರೇಲಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ