ನಿಮ್ಮನ್ನು ಮನೆಗೆ ಕಳುಹಿಸುವರೆಗೂ ಪಾದಯಾತ್ರೆ ನಿಲ್ಲದು: ಗುಡುಗಿದ ಯಡಿಯೂರಪ್ಪ
ಹಿಂದಿನ ಯಾವ ಮುಖ್ಯಮಂತ್ರಿ ಕೂಡ ತನ್ನ ಕುಟುಂಬಕ್ಕೆ ನಿವೇಶನ ಕೊಟ್ಟಿಲ್ಲ. ಇದು ಯಾರ ಅಪ್ಪನ ಮನೆ ದುಡ್ಡು? ಇಷ್ಟಾದರೂ ಪ್ರಾಮಾಣಿಕ ಎನ್ನುತ್ತೀರಿ. ಇಂತಹ ಸಿ.ಎಂ. ಡಿಸಿಎಂ ರಾಜ್ಯದಲ್ಲಿ ಇರುವವರೆಗೆ ಅಭಿವೃದ್ಧಿ ಸಾಧ್ಯವಿಲ್ಲ. ಶೀಘ್ರದಲ್ಲೇ ನಿಮ್ಮನ್ನು ರಾಜ್ಯದ ಜನ ಮನೆಗೆ ಕಳುಹಿಸುತ್ತಾರೆ. ಈಗ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130- 140 ಸ್ಥಾನ ಗೆಲ್ಲಲಿದೆ ಎಂದು ನುಡಿದರು.