ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಸಚಿವ ಕೆಂಡಾಮಂಡಲ

ಶನಿವಾರ, 15 ಜೂನ್ 2019 (19:24 IST)
ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲರಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ್ದರು ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ. ದಿಡೀರ್ ಭೇಟಿ ನೀಡಿ ಒಂದು ಗಂಟೆ ಕಳೆದರೂ ವೈದ್ಯರು ಪತ್ತೆಯಿರಲಿಲ್ಲ. ಅಲ್ಲದೇ ರೋಗಿಗಳನ್ನು ಕೇಳುವವರಿರಲಿಲ್ಲ. ಅಲ್ಲಿನ ದುರವಸ್ಥೆಯನ್ನು ಕಂಡು ಕೆಂಡಾಮಂಡಲಗೊಂಡ ಸಚಿವರು ಅಸಮಧಾನ ಹೊರಹಾಕಿದರು.

ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಅಲ್ಲಿನ ಅವ್ಯವಸ್ಥೆ ಕಂಡು ಗರಂ ಆದರು. ಸೂಕ್ತ ಕ್ರಮ ಕೈಗೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ