ಈ ವಿಚಾರದಲ್ಲಿ ಒಂದು ವಾರ ಜನರಿಗೆ ಸಮಯ ಕೊಡಲಾಗಿದೆ ಎಂದು ಕೃಷಿ ಸಚಿವ

ಸೋಮವಾರ, 22 ಮಾರ್ಚ್ 2021 (13:07 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಪ್ರಾರಂಭವಾಗಿದೆ. ಆದರೆ ರಾಜ್ಯದಲ್ಲಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿಲ್ಲ. ಈ ಬಗ್ಗೆ ಇದೀಗ  ಕೃಷಿ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಬಿಸಿ ಪಾಟೀಲ್ ಅವರು, ಒಂದು ವಾರ ಜನರಿಗೆ ಸಮಯ ಕೊಡಲಾಗಿದೆ. ಒಂದು ವಾರದ ಬಳಿಕ ಲಾಕ್ ಡೌನ್ ಬಗ್ಗೆ ಸಿಎಂ ಬಿಎಸ್ ವೈ ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

ಅಲ್ಲದೇ ಕೊರೊನಾ ವಿಚಾರದಲ್ಲಿ ಅವರವರೇ ರಕ್ಷಣೆ ಮಾಡಿಕೊಳ್ಳಬೇಕು. ಜನರೇ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಸರ್ಕಾರದ ಮೇಲೆ ತುಂಬಾ ಆರ್ಥಿಕ ಹೊಡೆತ ಬಿದ್ದಿದೆ. ಹಾಗಾಗಿ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ