ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಯವರನ್ನು ಸೆಳೆಯುವುದು ಅನಿವಾರ್ಯ ಎಂದ ಸಚಿವ

ಮಂಗಳವಾರ, 11 ಸೆಪ್ಟಂಬರ್ 2018 (16:30 IST)
ವಾಮಮಾರ್ಗದಿಂದ ಅಧಿಕಾರವನ್ನು ಹಿಡಿಯುವಂತಹ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಸಚಿವ ಆರೋಪಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ಬಿಜೆಪಿ  ಸೆಳೆಯುವ ಪ್ರಯತ್ನ ಮಾಡುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಶಾಸಕರನ್ನು ನಾವು ಸೆಳೆಯುವುದು ಅನಿವಾರ್ಯವಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಈಗಾಗಲೇ ಹಲವು ಬಿಜೆಪಿ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದ ಅವರು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದೆ ಎಂದು ಲೇವಡಿ ಮಾಡಿದರು.

ಸಚಿವ ರಮೇಶ ಜಾರಕಿಹೊಳಿ ಸ್ವಾಭಿಮಾನಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅನ್ಯಾಯ ಮಾಡುವದಿಲ್ಲ ಎಂಬ ನಂಬಿಕೆ ಇದೆ ಎಂದಿರುವ ಸಚಿವ ಪ್ರಿಯಾಂಕ ಖರ್ಗೆ, ಸಮ್ಮಿಶ್ರ ಸರಕಾರ ಐದು ವರ್ಷಗಳ ಆಡಳಿತ ಪೂರ್ಣಗೊಳಿಸುತ್ತದೆ ಎಂದರು.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ