ಸರಕಾರ ಕೈ ಕಟ್ಟಿ ಕುಳಿತುಕೊಳ್ಳಲ್ಲ ಎಂದ ಸಚಿವ

ಬುಧವಾರ, 12 ಆಗಸ್ಟ್ 2020 (17:30 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಕೈ ಕಟ್ಟಿ ಕೂರುವುದಿಲ್ಲ. ಹೀಗಂತ ಸಚಿವರೊಬ್ಬರು ಖಡಕ್ ಆಗಿ ಹೇಳಿದ್ದಾರೆ.


ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿಕೆ ನೀಡಿದ್ದು, ಇದು  ಅತ್ಯಂತ ದುರದೃಷ್ಟಕರ ಘಟನೆ. ಕಾನೂನನ್ನು  ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ.

ಇದು ವ್ಯವಸ್ಥಿತವಾದ ಪಿತೂರಿ ಎಂದು  ಮೇಲ್ನೋಟಕ್ಕೆ ಅರ್ಥವಾಗುತ್ತದೆ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದ ಪೋಸ್ಟ್ ಬಗ್ಗೆ ಈ ರೀತಿ ಪಿತೂರಿ ಮಾಡಬಾರದು. ಕಾನೂನಿನಲ್ಲಿ ಕ್ರಮ ತೆಗೆದುಕೊಳ್ಳಲು ಅವಕಾಶವಿತ್ತು. ಕಾನೂನನ್ನು ಯಾರೇ ಕೈಗೆತ್ತಿಕೊಂಡು ದುಷ್ಕೃತ್ಯ ಎಸಗಿದರೂ  ಸರ್ಕಾರ ಸುಮ್ಮನಿರುವುದಿಲ್ಲ,  ಸರ್ಕಾರ ಕೈ ಕಟ್ಟಿ ಕೂರುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ