ಸಂಪುಟ ವಿಸ್ತರಣೆಗೆ ಕೂಡಿ ಬರದ ಮುಹೂರ್ತ

ಗುರುವಾರ, 20 ಸೆಪ್ಟಂಬರ್ 2018 (20:22 IST)
ರಾಜ್ಯದ ಸಮ್ಮಿಶ್ರ ಸರಕಾರ ಸ್ಥಿರತೆ ಕುರಿತು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬ ಆಗುವ ಸಾಧ್ಯತೆ ಹೆಚ್ಚಿದೆ.

ಜೆಡಿಎಸ್, ಕಾಂಗ್ರೆಸ್ ನೇತೃತ್ವದ ರಾಜ್ಯ ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬರುತ್ತಿಲ್ಲ. ಗಣೇಶ ಹಬ್ಬದ ಬಳಿಕ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಮಾತುಗಳು ಹರಿದಾಡಿದ್ದೇ ಬಂತು. ಆದರೆ ಅದು ಕೂಡಿ ಬರಲಿಲ್ಲ. ವಿಧಾನ ಪರಿಷತ್ ಚುನಾವಣೆ ಬಳಿಕ ಸಂಪುಟವನ್ನು ವಿಸ್ತರಣೆ ಮಾಡುವುದು ಸೂಕ್ತ ಎಂದು ಕೆಲವು ಮುಖಂಡರು ಹೇಳುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಪರಿಷತ್ ಚುನಾವಣೆ ಬಳಿಕ ಸಮಾಲೋಚನೆ ನಡೆಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ