ತಂಗಿಯ ಜೊತೆ ಫೋನ್ ನಲ್ಲಿ ಮಾತನಾಡಿದ್ದಕ್ಕೆ ನಡೆಯಿತು ಕೊಲೆ

ಶುಕ್ರವಾರ, 11 ಅಕ್ಟೋಬರ್ 2019 (12:26 IST)
ಬಾಗಲಕೋಟೆ : ತಂಗಿಯ ಜೊತೆ ಫೋನ್ ನಲ್ಲಿ ಮಾತನಾಡಿದ ಕಾರಣಕ್ಕೆ ಆಕೆಯ ಪ್ರಿಯಕರನನ್ನು ಆಕೆಯ ಸಹೋದರ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗಾ ಕ್ರಾಸ್ ಬಳಿ ನಡೆದಿದೆ.




ನಬಿಸಾಬ್ ತಹಸೀಲ್ದಾರ(22) ಕೊಲೆಯಾದ ಯುವಕ. ವಿಠ್ಠಲ್ ಕೊಲೆ ಮಾಡಿದ ಆರೋಪಿ. ನಬಿಸಾಬ್, ವಿಠ್ಠಲ ಸಹೋದರಿಯನ್ನು ಪ್ರೀತಿಸುತ್ತಿದ್ದು,  ಆಗಾಗ ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವಿಷಯ ತಿಳಿದ ವಿಠ್ಠಲ, ನಬಿಸಾಬ್‍ ಗೆ ತನ್ನ ಸಹೋದರಿ ಜೊತೆ ಫೋನಿನಲ್ಲಿ ಮಾತನಾಡದಂತೆ ಎಚ್ಚರಿಕೆ ನೀಡಿದ್ದ.


ಆದರೆ ವಿಠ್ಠಲ ಸಹೋದರಿ ಜೊತೆ ನಬಿಸಾಬ್ ಫೋನಿನಲ್ಲಿ ಮಾತು ಮುಂದುವರಿಸಿದ ಕಾರಣ ಕೋಪಗೊಂಡ ವಿಠ್ಠಲ್ ತನ್ನ ಸ್ನೇಹಿತನ ಜೊತೆ ಸೇರಿ ಆತನನ್ನು ಕೋಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಸದ್ಯ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ