ತಾವು ವಾಸ್ತವ್ಯ ಹೂಡುವ ಗ್ರಾಮದ ಹೆಸರನ್ನು ಸಿಕ್ರೆಟ್ ಆಗಿಟ್ಟ ಸಿಎಂ

ಬುಧವಾರ, 5 ಜೂನ್ 2019 (11:21 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ಸಕಲ ಸಿದ್ಧತೆ ನಡೆಯುತ್ತಿದ್ದು, ಆದರೆ ಯಾವ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡುತ್ತಾರೆ ಎಂಬುದನ್ನು ಮಾತ್ರ ರಹಸ್ಯವಾಗಿ ಇಡಲಾಗಿದೆ ಎನ್ನಲಾಗಿದೆ.




ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 21 ರಿಂದ ಗ್ರಾಮ ವಾಸ್ತವ್ಯ ಮಾಡಲಿದ್ದು, ಅಂದು ಯಾದಗಿರಿ ಜಿಲ್ಲೆಯ ಗುರುಮಟ್ಕಲ್ ತಾಲೂಕಿನಲ್ಲಿ, ನಂತರ ಜೂನ್ 22 ಕ್ಕೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಾರೆ ಎನ್ನಲಾಗಿದ್ದು, ಆದರೆ ಯಾವ ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಾರೆ ಎಂಬುದನ್ನು ಸಿಎಂ ತಿಳಿಸಿಲ್ಲ. ಇದಕ್ಕೆ ಕಾರಣ ಗ್ರಾಮ ವಾಸ್ತವ್ಯದ ಮಾಡಲಿರುವ ಗ್ರಾಮದ ಬಗ್ಗೆ ಮೊದಲೇ ಹೇಳಿದಲ್ಲಿ ಅಧಿಕಾರಿಗಳು ಆ ಗ್ರಾಮಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ. ಹಾಗಾಗಿ ಗ್ರಾಮದ ಹೆಸರನ್ನು ಸಿಎಂ ಬಹಿರಂಗಪಡಿಸುತ್ತಿಲ್ಲ ಎಂದು ಹೇಳಲಾಗಿದೆ.

ಆದರೆ ಗ್ರಾಮ ವಾಸ್ತವ್ಯದ ಕುರಿತು ಸಿಎಂ ಕುಮಾರಸ್ವಾಮಿ ಮಾಹಿತಿ ಕಲೆ ಹಾಕುತ್ತಿದ್ದು, ಯಾವ ಗ್ರಾಮದಲ್ಲಿ ಏನು ಸಮಸ್ಯೆ ಎಂದು ತಿಳಿದು, ಯಾವ ಗ್ರಾಮದಲ್ಲಿ ಹೆಚ್ಚು ಸಮಸ್ಯೆ ಇದೆಯೋ ಆ ಗ್ರಾಮದಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ, ಅದಕ್ಕಾಗಿ ಈಗಾಗಲೇ ಜಿಲ್ಲಾಧಿಕಾರಿ ಮತ್ತು ಎಸಿಗಳಿಂದ ವರದಿ ತರಿಸಿಕೊಳ್ಳುತ್ತಿದ್ದು, ವಾಸ್ತವ್ಯಕ್ಕೆ ಒಂದು ವಾರವಿರುವಾಗ ಗ್ರಾಮದ ಹೆಸರು ಘೋಷಣೆ ಮಾಡಲಿದ್ದಾರೆ ಅಂತ ಹೇಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ