ರಾಜ್ಯದಲ್ಲಿ ಅತಂತ್ರ ಸ್ಥಿತಿ ಆಗಬೇಕೆಂಬುದೇ ವಿಪಕ್ಷಗಳ ಉದ್ದೇಶ-ಸಿಎಂ ಕಿಡಿ

ಶನಿವಾರ, 23 ನವೆಂಬರ್ 2019 (12:06 IST)
ಬೆಂಗಳೂರು : ಡಿಸೆಂಬರ್ 5 ರಂದು ಉಪಚುನಾವಣೆಯ ಹಿನ್ನಲೆಯಲ್ಲಿ ಇಂದು ಒಂದೇ ದಿನದಲ್ಲಿ ಮೂರು ಕ್ಷೇತ್ರಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಬ್ಬರದ ಪ್ರಚಾರ ಮಾಡಿದ್ದಾರೆ.


ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಬೆಂಬಲ ಸಿಗಲಿದೆ. ಕಾಂಗ್ರೆಸ್ , ಜೆಡಿಎಸ್ ನಾಯಕರಿಗೆ ಯಾವುದೇ  ಉತ್ತರ ಕೊಡಲ್ಲ ಎಂದು ಹೇಳಿದ್ದಾರೆ.

 

ಅಲ್ಲದೇ ಸುಸೂತ್ರವಾಗಿ ಸರ್ಕಾರ ನಡೀಬಾರದು, ಗೊಂದಲ ಆಗಬೇಕು. ರಾಜ್ಯದಲ್ಲಿ ಅತಂತ್ರ ಸ್ಥಿತಿ ಆಗಬೇಕೆಂಬುದೇ ವಿಪಕ್ಷಗಳ ಉದ್ದೇಶ. ಇದನ್ನು ಅರ್ಥ ಮಾಡಿಕೊಂಡು ಜನರು ಮತ ಹಾಕುತ್ತಾರೆ ಎಂದು ಅವರು ತಿಳಿಸದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ