ಟೆಕ್ಕಿ ಆಕಾಂಕ್ಷ ಕೊಂದಿದ್ದವನು ಅರೆಸ್ಟ್​​​

ಗುರುವಾರ, 6 ಜುಲೈ 2023 (14:09 IST)
ಬೆಂಗಳೂರಿನ ಜೀವನ ಭೀಮಾನಗರದ ಟೆಕ್ಕಿ ಆಕಾಂಕ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಪಿತ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿಚಾರಣೆ ವೇಳೆ ಆಕಾಂಕ್ಷ ಕೊಲೆ ಮಾಡಿದ್ದ ಕಹಾನಿ ಬಯಲಾಗದೆ. ಮೃತ ಆಕಾಂಕ್ಷ ಬೇರೊಬ್ಬನ ಜೊತೆ ಪ್ರೀತಿಯಲ್ಲಿದ್ದಿದ್ದನ್ನ ಆರೋಪಿ ತಿಳಿದುಕೊಂಡಿದ್ದ. ಇದು ಆತನಿಗೆ ತಿಳಿದ ಮೇಲೆ, ಬ್ರೇಕ್ ಅಪ್​​​ ಮಾಡಿಕೊಳ್ಳುವಂತೆ ಅಕಾಂಕ್ಷ ಹೇಳಿದ್ದಳು. ಆದರೂ ಆಕೆಯನ್ನ ಬಿಡದ ಆರೋಪಿ ಅರ್ಪಿತ್ ಮದುವೆಯಾಗುವಂತೆ ಒತ್ತಾಯ ಮಾಡಿದ್ದ.. ಈ ವೇಳೆ ಆಕಾಂಕ್ಷ ಮದುವೆಯಾಗಲ್ಲ ಅಂದಿದ್ದಾಳೆ. ಇದೇ ಕಾರಣಕ್ಕೆ ಅರ್ಪಿತ್ ಉಸಿರುಗಟ್ಟಿಸಿ ಆಕಾಂಕ್ಷಳನ್ನ ಹತ್ಯೆ ಮಾಡಿದ್ದಾನೆ.ಬಳಿಕ ಬೆಂಗಳೂರಿನಿಂದ ಹೊರಟವನು ಉತ್ತರ ಭಾರತವನ್ನ ಸೇರಿದ್ದ.. ಇದೀಗ ಆತನನ್ನ ಪೊಲೀಸರು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ