ಪಿಡಬ್ಲ್ಯುಡಿ ಅಧಿಕಾರಿಗಳ ಸಂಧಾನ ಸಫಲ; ಮಾಲೀಕರ ಮುಷ್ಕರ ಅಂತ್ಯ

ಭಾನುವಾರ, 28 ಜನವರಿ 2018 (07:44 IST)
ಬೆಂಗಳೂರು: ಲೋಕೋಪಯೋಗಿ ಇಲಾಕೆ ಅಧಿಕಾರಿಗಳ ಸಂಧಾನ ಸಫಲವಾಗಿದೆ. ಪೆಟ್ರೋಲ್ ಡೀಸೆಲ್ ಟ್ಯಾಂಕರ್ ಮಾಲೀಕರ ಮುಷ್ಕರ ಅಂತ್ಯ ವಾಗಿದೆ.ದೇವನಗೊಂದಿ ಟರ್ಮಿನಲ್ ರಸ್ತೆ ದುರಸ್ತಿಗೆ ಒತ್ತಾಯಿಸಿ ಮಾಲೀಕರು ಮುಷ್ಕರು ಆರಂಭಿಸಿದ್ದರು. ಟ್ಯಾಂಕರ್ ಮಾಲೀಕರ ಜತೆ ಪಿಡಬ್ಲ್ಯುಡಿ ಅಧಿಕಾರಿಗಳು ಚರ್ಚಿಸಿದ ನಂತರ ಮಾತುಕತೆ ಯಶಸ್ವಿಯಾದ ಹಿನ್ನೆಲೆ ಈ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳಲಾಗಿದೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೇವನಗೊಂದಿ ಟರ್ಮಿನಲ್ ರಸ್ತೆ ದುರಸ್ತಿಗೆ ಪಿಡಬ್ಲ್ಯುಡಿ ಸಮ್ಮತಿಯನ್ನು ನೀಡಿದೆ. ಹಾಗಾಗಿ ದೇವನಗೊಂದಿಯಲ್ಲಿ ಮಾಲೀಕರು ಮುಷ್ಕರವನ್ನು ಹಿಂಪಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ