ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವದಂತಿ ಸುಳ್ಳು ಎಂದ ಸಂಸದೆ

ಶುಕ್ರವಾರ, 16 ನವೆಂಬರ್ 2018 (19:08 IST)
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿ ಸುಳ್ಳು ವದಂತಿಯಾಗಿದೆ ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮಂಗಳೂರು ಬೈಠಕ್ ನಲ್ಲಿ ಚರ್ಚೆಯಾಗಿಲ್ಲ. ಇದು ಎಲ್ಲವೂ ಊಹಾಪೋಹ ಸುಳ್ಳು ಸುದ್ದಿಯಾಗಿದೆ ಎಂದಿದ್ದಾರೆ.

ಯಾರೋ ಉದ್ದೇಶಪೂರ್ವಕವಾಗಿ ಹುಟ್ಟು ಹಾಕಿದ ಸುಳ್ಳು ಸುದ್ದಿ ಇದಾಗಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದೆ. ಈ ಸಂದರ್ಭ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಇವತ್ತಿನ ತನಕ ಚರ್ಚೆಯಾಗಿಲ್ಲ ಎಂದರು.

ಮಾಧ್ಯಮಗಳಲ್ಲಿ ಬರುವ ಚರ್ಚೆ ಸುಳ್ಳು ಮಾಹಿತಿಯಿಂದಾಗಿದೆ. ಬಿಜೆಪಿಯನ್ನು ಅಭದ್ರಗಿಳಿಸಲು ಯತ್ನ ಷಡ್ಯಂತ್ರ ನಡೀತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ