ದತ್ತಪೀಠದಲ್ಲಿ ಕೋಮುಗಲಭೆ ಸೃಷ್ಟಿಸುವ ಸಂಚು ವಿಫಲ

ಸೋಮವಾರ, 4 ಡಿಸೆಂಬರ್ 2017 (17:44 IST)
ದತ್ತಜಯಂತಿಯ ಸಂದರ್ಭದಲ್ಲಿ ಕೋಮುಗಲಭೆ ಸೃಷ್ಟಿಸಲು ರೂಪಿಸಿರುವ ಸಂಚು ದಕ್ಷ ಪೊಲೀಸ್ ಇಲಾಖೆಯಿಂದ ಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ದತ್ತಪೀಠದಲ್ಲಿ ಅಹಿತಕರ ವಾತಾವರಣ ಎದುರಾದಲ್ಲಿ ಪೆಟ್ರೋಲ್ ಬಾಂಬ್‌‍ಗಳನ್ನು ಎಸೆದು ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ತೆಗೆದುಕೊಂಡು ಹೋಗುವ ಸಂಚು ರೂಪಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ದತ್ತಪೀಠದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ ಕೋಮುಗಲಭೆಗೆ ಕಾರಣವಾಗುತ್ತಿತ್ತು. ತದನಂತರ ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿತ್ತು ಕೆಲ ವಿಚ್ಚಿದ್ರಕಾರಿ ಶಕ್ತಿಗಳು ಇಂತಹ ಸಮಯಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ