ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಸದ್ದು ಮಾಡಿದ್ದ ಮೀಟೂ ಪ್ರಕರಣ

ಭಾನುವಾರ, 28 ನವೆಂಬರ್ 2021 (21:31 IST)
ಬೆಂಗಳೂರು: ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಸದ್ದು ಮಾಡಿದ್ದ ಮೀಟೂ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್‌ಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನೋಟೀಸ್ ತಲುಪಿದ ಮೂರು ದಿನದೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಶ್ರುತಿ ಹರಿಹರನ್‌ಗೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
ವಿಸ್ಮಯ ಚಿತ್ರದ ಚಿತ್ರೀಕರಣ ವೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಆರೋಪಿಸಿದ್ದರು. ಈ ಸಂಬಂಧ 2018ರಲ್ಲಿ ಕಬ್ಬನ್ ಪಾಕ್ ಠಾಣೆಯಲ್ಲಿ ಶ್ರುತಿ ದೂರು ದಾಖಲಿಸಿದ್ದರು. ದೂರಿನ್ವಯ ಅರ್ಜುನ್ ಸರ್ಜಾ ವಿರುದ್ಧ ಭಾರತೀಯ ದಂಡ ಸಂಹಿತೆ 354, 354 ಎ ಮತ್ತು 506 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಮೂರು ವರ್ಷದ ಬಳಿಕ ಇದೀಗ ಮೀಟೂ ಪ್ರಕರಣ ಮತ್ತೆ ಸದ್ದು ಮಾಡಿದೆ.
ಇದೀಗ ಪ್ರಕರಣ ತನಿಖೆಯು ಅಂತಿಮ ಹಂತಕ್ಕೆ ತಲುಪಿದೆ. ಮೀಟೂ ಹೆಸರಿನಲ್ಲಿ ನಟಿ ಶೃತಿಹರಿಹರನ್ ಕತೆ ಕಟ್ಟಿದ್ದರು ಎನ್ನುವ ಅನುಮಾನ ಕಾಡತೊಡಗಿದೆ. ತನಿಖೆ ವೇಳೆ ಯಾವೂದೇ ಸಾಕ್ಷಿ ಸಿಗದ ಹಿನ್ನೆಲೆಯಲ್ಲಿ ಪೊಲೀಸರು  ಕೋರ್ಟ್‌ನಲ್ಲಿ 'ಬಿ' ರಿಪೋರ್ಟ್ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ