ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜೊತೆ ಕಾಂಗ್ರೆಸ್ ನಾಯಕರ ರಹಸ್ಯ ಸಭೆ; ವಿಡಿಯೋ ವೈರಲ್

ಗುರುವಾರ, 2 ಮೇ 2019 (11:05 IST)
ಬೆಂಗಳೂರು : ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ  ಸೀಕ್ರೆಟ್ ಮೀಟಿಂಗ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಆಪ್ತರಾದ ಮಾಜಿ ಸಚಿವರು ಹಾಗೂ ಶಾಸಕರು ಪಾಲ್ಗೊಂಡಿದ್ದರು ಎಂಬ ಮಾಹಿತಿ ಬಹಿರಂಗಗೊಂಡಿದೆ.




ನಗರದ ಖಾಸಗಿ ಹೋಟೆಲ್ ವೊಂದರಲ್ಲಿ ನಿನ್ನೆ ರಾತ್ರಿ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ ಆಯೋಜಿಸಿದ್ದ ರಹಸ್ಯ ಸಭೆಯಲ್ಲಿ ಕೈ ನಾಯಕರಾದ ಮಾಜಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಶಾಸಕರುಗಳಾದ ನರೇಂದ್ರ ಸ್ವಾಮಿ. ಬಾಲಕೃಷ್ಣ ಕೆ ಬಿ , ಚಂದ್ರಶೇಖರ್ ಸೇರಿದಂತೆ ಸಚ್ಚಿದಾನಂದ, ಪುಟ್ಟಣ್ಣ, ಗಣಿಗ ರವಿ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ಮಾಜಿ ಸಿಎಂ ಸಿದ್ದರಾಮಯ್ಯ ಮೀಟಿಂಗ್ ನಲ್ಲಿ ಪಾಲ್ಗೊಂಡಿದ್ದರು.  ಇದಕ್ಕೆ ಸಂಬಂಧಪಟ್ಟ ವಿಡಿಯೋ ಇದೀಗ ವೈರಲ್ ಆಗಿದೆ.


ಸುಮಲತಾ ಪರ ಸಿದ್ದರಾಮಯ್ಯ ತೆರೆಮರೆ ಆಟ ಆಡಿದ್ದಾರೆ ಎಂಬ ಮಾತಿಗೆ ಇದು ಪುಷ್ಠಿ ನೀಡುವಂತಾಗಿದೆ. ಅಲ್ಲದೇ ಮಾಜಿ ಸಚಿವ ಚೆಲುವರಾಯಸ್ವಾಮಿ ಅಂಡ್ ಟೀಂ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ