ತಾಯಿಯ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕರನ್ನು ತಡೆದದ್ದಕ್ಕೆ ಮಗನ ಮೇಲೆ ಮಾರಣಾಂತಿಕ ಹಲ್ಲೆ

ಶನಿವಾರ, 10 ನವೆಂಬರ್ 2018 (07:04 IST)
ಚಿತ್ರದುರ್ಗ : ತಾಯಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕರನ್ನು ತಡೆದದ್ದಕ್ಕೆ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಹೊಸದುರ್ಗ ತಾಲೂಕಿನ ಮಾಡದಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.


ಗೊಲ್ಲರಹಟ್ಟಿ ನಿವಾಸಿ ಚಿದಾನಂದ(26) ಹಲ್ಲೆಗೊಳಗಾದ ಯುವಕ. ಈತನ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿ ಸಹಿಸದ ಅದೇ ಗ್ರಾಮದ ಮತ್ತೊಂದು ಕೋಮಿನ ಯುವಕರಾದ  ಶ್ರೀನಿವಾಸ, ಸುನಿಲ್, ಮಂಜ, ಪ್ರವೀಣ್ ಸೇರಿದಂತೆ ಏಳು ಜನರು ಮದ್ಯ ಸೇವನೆ ಮಾಡಿ ಚಿದಾನಂದ ಮನೆಗೆ ಬಂದು ಆತನ ತಾಯಿಯ ಜೊತೆ  ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ತಡೆಯಲು ಬಂದ ಚಿದಾನಂದನ ತಲೆಗೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಲ್ಲದೆ, ಇದನ್ನು ತಡೆದ ಆತನ ತಾಯಿಯ ಮೇಲೂ ಹಲ್ಲೆ ಮಾಡಿದ್ದಾರೆ.


ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಬಂದ ಕಾರಣ ಯುವಕರು ಪರಾರಿಯಾಗಿದ್ದಾರೆ. ಈ ಘಟನೆಯಿಂದಾಗಿ ಎದೆ ಹಾಗೂ ತಲೆಗೆ ಗಂಭೀರ ಗಾಯವಾಗಿದ್ದ ಚಿದಾನಂದ ಅವರನ್ನು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೊಸದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ