ಸ್ಮಶಾನವಿಲ್ಲವೆಂದು ರಸ್ತೆ ಬದಿಯೇ ಅಂತ್ಯಸಂಸ್ಕಾರ ಮಾಡಿದ ಮಗ

ಮಂಗಳವಾರ, 26 ಡಿಸೆಂಬರ್ 2023 (18:43 IST)
ಸ್ಮಶಾನಕ್ಕೆ ಜಾಗವಿಲ್ಲದ ಹಿನ್ನೆಲೆ ರಸ್ತೆ ಬದಿಯೇ ಮಗ, ತಂದೆಯ ಅಂತ್ಯಸಂಸ್ಕಾರ ಮಾಡಿದ ಘಟನೆ ತುಮಕೂರು ತಾಲೂಕಿನ ದುರ್ಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

ದುರ್ಗದಹಳ್ಳಿ ಗ್ರಾಮಕ್ಕೆ ಸ್ಮಶಾನ ಮಂಜೂರು ಮಾಡಿಕೊಡುವಂತೆ ತಹಸೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳಿಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ.ಯಾರು ಸ್ಪಂದಿಸದ ಹಿನ್ನೆಲೆ ರಸ್ತೆ ಬದಿಯೇ ಅಂತ್ಯಕ್ರಿಯೆ ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ