ಕೃಷ್ಣಾ ನದಿಗೆ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ; ಇಂದು ಅಥಣಿ ಬಂದ್‍

ಸೋಮವಾರ, 20 ಮೇ 2019 (09:36 IST)
ಬೆಳಗಾವಿ : ಕೃಷ್ಣಾ ನದಿಗೆ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಇಂದು ಅಥಣಿ ಪಟ್ಟಣ ಬಂದ್‍ಗೆ ಕರೆ ನೀಡಿದೆ.




ನೀರಿಲ್ಲದೆ ಬರಿದಾಗಿರುವ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ 10ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಬಂದ್ ಕರೆ ನೀಡಿದೆ. ರೈತ ಪರ ಸಂಘಟನೆಗಳ ಜೊತೆಗೆ ಕನ್ನಡಪರ ಹಾಗೂ ದಲಿತ ಸಂಘಟನೆಗಳು ಕೂಡ ಈ ಬಂದ್‍ ಗೆ ಬೆಂಬಲ ನೀಡುತ್ತಿವೆ.


ಅಲ್ಲದೆ ಬಂದ್ ಹಿನ್ನೆಲೆ ನಸುಕಿನ ಜಾವದಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟು ಗಳು ಬಂದ್ ಆಗಿದ್ದು, ಜನರು ಪರದಾಡುವಂತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ