ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ 15ಬಗೆಯ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಆರೋಗ್ಯ ಇಲಾಖೆ ಅಭಿಪ್ರಯಾಪಟ್ಟಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು 15ಬಗೆಯ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ನಾನು ಮನವಿ ಮಾಡುತ್ತೇನೆ.
ಆಸ್ಪತ್ರೆ, ಔಷಧ ಮಳಿಗೆಗಳಲ್ಲಿ ಯಾವುದೇ ಸಂಗ್ರಹ ಇದ್ದರೆ, ನಿಮ್ಮ ಸ್ಥಳೀಯ ಔಷಧ ನಿರೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರಿಗೆ ತಕ್ಷಣವೇ ತಿಳಿಸಿ.
ನಿಮ್ಮ ಸುರಕ್ಷತೆ ನಮ್ಮ ಆದ್ಯತೆ. ದಯವಿಟ್ಟು ಈ ಕೆಳಗೆ ಪಟ್ಟಿ ಮಾಡಲಾದ ಬ್ಯಾಚ್ನ ಔಷಧಗಳು/ಸೌಂದರ್ಯವರ್ಧಕಗಳನ್ನು ಬಳಸಬೇಡಿ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
<blockquote class="twitter-tweet"><p lang="kn" dir="ltr">ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು ಈ ಕೆಳಗಿನ ಔಷಧಗಳು/ಸೌಂದರ್ಯವರ್ಧಕಗಳನ್ನು 'ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ' ಎಂದು ಅಭಿಪ್ರಾಯಪಟ್ಟಿದೆ.<br><br>ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ನಾನು ಮನವಿ… <a href="https://t.co/qbbu00r0pp">pic.twitter.com/qbbu00r0pp</a></p>— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) <a href="https://twitter.com/dineshgrao/status/1937877439759126965?ref_src=twsrc%5Etfw">June 25, 2025</a></blockquote> <script async src="https://platform.twitter.com/widgets.js" charset="utf-8"></script>