ರಾಜ್ಯದ ಜನ ಮೈತ್ರಿ ಪರವಾಗಿದ್ದಾರೆ ಎಂದ ಸಿಎಂ

ಮಂಗಳವಾರ, 6 ನವೆಂಬರ್ 2018 (16:38 IST)
ಉಪಚುನಾವಣೆ ಫಲಿತಾಂಶದ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ರಾಜ್ಯದ ಜನರು ಮೈತ್ರಿ ಪಕ್ಷದ ಪರವಾಗಿದ್ದಾರೆ ಎಂದಿದ್ದಾರೆ.

ಸಿಎಂ ಕುಮಾರಸ್ವಾಮಿ ಮಾತನಾಡಿ, ನಾಲ್ಕು ಕ್ಷೇತ್ರದಲ್ಲಿ ನಮಗೆ ಭರ್ಜರಿ ಗೆಲುವಾಗಿದ್ದರೆ ಶಿವಮೊಗ್ಗ ಕ್ಷೇತ್ರದಲ್ಲಿ ನೈತಿಕ ಗೆಲುವಾಗಿದೆ.    ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯನ್ನು ಅಪವಿತ್ರ ಎಂದು ಕರೆಯುತ್ತಿದ್ದ ಬಿಜೆಪಿಯವರಿಗೆ ಈ ಫಲಿತಾಂಶವು ತಕ್ಕ ಉತ್ತರ ಕೊಟ್ಟಿದೆ ಎಂದು ಕುಮಾರಸ್ವಾಮಿ ಹೇಳಿದರು.  

ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಒಕ್ಕೂರಲಿನಿಂದ ಒಮ್ಮತದ ಅಭ್ಯರ್ಥಿಗಳನ್ನು ಆರಿಸಿ ಚುನಾವಣೆ ಎದುರಿಸುವುದು ಮಿತ್ರ ಪಕ್ಷಗಳ ಗುರಿ ಆಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ