ಹೂವಿನಲ್ಲಿ ಕಲ್ಲು ಬಂದಿಲ್ಲ, ಯಾರೋ ದುಷ್ಕರ್ಮಿಗಳು ಎಸೆದಿದ್ದಾರೆ : ಪರಮೇಶ್ವರ್

ಭಾನುವಾರ, 30 ಏಪ್ರಿಲ್ 2023 (15:34 IST)
ತುಮಕೂರು : ಹೂವಿನಲ್ಲಿ ಕಲ್ಲು ಬಂದಿಲ್ಲ. ಯಾರೋ ದುಷ್ಕರ್ಮಿಗಳು ಎಸೆದಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸಂಜೆ ಭೈರೆನಹಳ್ಳಿ ಬಳಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಈ ವೇಳೆ ಸಾವಿರಾರು ಜನ ಕಾರ್ಯಕರ್ತರು ಇದ್ದರು. ನನ್ನನ್ನ ಮೇಲಿತ್ತಿಕೊಂಡರು. ಜೆಸಿಬಿಯಿಂದ ಮೇಲೆಯಿಂದ ಹೂ ಹಾಕುತ್ತಿದ್ದರು.

ಈ ವೇಳೆ ನನ್ನ ತಲೆಯಲ್ಲಿ ರಕ್ತ ಬರೋಕೆ ಶುರುವಾಯಿತು. ತುಂಬಾ ರಕ್ತ ಬಂತು. ಅಲ್ಲೇ ನಮ್ಮ ಆಸ್ಪತ್ರೆ ವೈದ್ಯರು ನನ್ನ ಭೇಟಿ ಮಾಡೋಕೆ ಬಂದಿದ್ದರು. ಈ ವೇಳೆ ಅವರೇ ಕೂಡಲೇ ಚಿಕಿತ್ಸೆ ನೀಡಿದರು. ಬಳಿಕ ಅಕ್ಕಿರಾಂಪುರದ ಆರೋಗ್ಯ ಕೇಂದ್ರಕ್ಕೆ ಕರೆತಂದರು ಎಂದು ಹೇಳಿದರು.

ಹೂವಿನಲ್ಲಿ ಕಲ್ಲು ಬಂದಿಲ್ಲ. ಯಾರೋ ದುಷ್ಕರ್ಮಿಗಳು ಎಸೆದಿದ್ದಾರೆ. ನಾನು 35 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೆ ವಿರೋಧಿಗಳು ಬಹಳ ಕಡಿಮೆ. ದ್ವೇಷ ಇದ್ರೆ ಈ ರೀತಿಯಲ್ಲಿ ಮಾಡಬಾರದು. ಸಾರ್ವಜನಿಕ ವಲಯದಲ್ಲಿ ನಾವು ಇದ್ದೇವೆ  ಎಂದು ಬೇಸರ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ