ಸುರಂಗ ಕೊರೆದು ಹೊರಬಂದ ಟಿಬಿಎಂ ಮಿಷನ್

ಗುರುವಾರ, 18 ಆಗಸ್ಟ್ 2022 (20:26 IST)
ಎರಡನೇ ಹಂತದ ಮೆಟ್ರೋ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ನಮ್ಮ ಮೆಟ್ರೋ ನಿಗಮ ಪಣತೊಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಎರಡನೇ ಹಂತದ ಕಾಮಗಾರಿ ವೇಗವನ್ನ ಪಡೆದುಕೊಂಡಿದೆ. ಗೊಟ್ಟಗೆರೆ ನಾಗವಾರ ಮಾರ್ಗವಾಗಿ  ಸುಮಾರು 13 ಕಿ.ಮೀ ಸುರಂಗ ಕಾರ್ಯ ನಡೆಯುತ್ತಿದ್ದು  2022 ಫೆಬ್ರವರಿ 2ರಂದು ಕಂಟೋನ್ಮೆಂಟ್ ನಿಲ್ದಾಣದಿಂದ ಪಾಟರಿ ಟೌನ್ ನಿಲ್ದಾಣದ ಕಡೆ ಸುರಂಗ ಪ್ರವೇಶಿಸಿದ್ದ ವಿಂಧ್ಯಾ ಹೆಸರಿನ ಟಿಬಿಎಂ ಮಿಷನ್  ಗುರುವಾರ ಬೆಳಗ್ಗೆ 10:30ಕ್ಕೆ ತನ್ನ ಕಾರ್ಯವನ್ನ ಯಶಸ್ವಿಯಾಗಿ ಪೂರ್ಣಗೊಳಿಸಿ ಹೊರಬಂದಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ