ಈ ಪುಟ್ಟ ಬಾಲಕಿಯ ಸಾಹಸಕ್ಕೆ ಬೇಶ್ ಎಂದ ಗ್ರಾಮಸ್ಥರು

ಶುಕ್ರವಾರ, 14 ಜುಲೈ 2023 (11:10 IST)
ತುಮಕೂರು : ಜೀವದ ಹಂಗು ತೊರೆದು ಸಹೋದರಿ ಸಹೋದರನ ಜೀವ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಕುಚ್ಚಂಗಿಯಲ್ಲಿ ನಡೆದಿದೆ.
 
ಬಾವಿಗೆ ಬಿದ್ದಿದ್ದ ತಮ್ಮ ಹಿಮಾಂಶುನನ್ನು ಸಹೋದರಿ ಶಾಲೂ ರಕ್ಷಿಸಿದ್ದಾಳೆ. ಉತ್ತರ ಪ್ರದೇಶ ಮೂಲದ ಜೀತೇಂದ್ರ, ರಾಜಕುಮಾರಿ ದಂಪತಿ ಕುಚ್ಚಂಗಿಯಲ್ಲಿನ ತೋಟದ ಮನೆಯಲ್ಲಿ ಕೆಲಸಕ್ಕೆ ಇದ್ದಾರೆ. ದಂಪತಿಗೆ ಒಟ್ಟು ನಾಲ್ವರು ಮಕ್ಕಳು. ಶಾಲೂ(8), ಹಿಮಾಂಶು(7), ರಾಶಿ(3), ಹಾಗೂ ಕಪಿಲ್(2).

ನಿನ್ನೆ (ಜು.13) ಹಿಮಾಂಶು ಹಾಗೂ ರಾಶಿ ತೋಟದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಾವಿಗೆ ಬಿದ್ದ ಚೆಂಡು ತೆಗೆಯಲು ಹೋಗಿ ಹಿಮಾಂಶು ಬಾವಿಯಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದನು.
ಇದನ್ನು ಕಂಡು ಶಾಲೂ ಲೈಫ್ ಜಾಕೀಟ್ ಧರಿಸಿ ಬಾವಿಗೆ ಜಿಗಿದಿದ್ದಾಳೆ. ಇದೇ ವೇಳೆ ಶಾಲೂ ಸಹಾಯಕ್ಕೆ ಅಕ್ಕಪಕ್ಕದ ಜನರು ಆಗಮಿಸಿದ್ದಾರೆ. ನಂತರ ಸ್ಥಳೀಯರು ಬಾವಿಯಿಂದ ಇಬ್ಬರನ್ನು ಮೇಲಕ್ಕೆ ಎತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ