ನನ್ನ ಮೇಲೆ ಯುದ್ಧ ಮಾಡುವವರ ವಿರುದ್ಧ ಯುದ್ಧಕ್ಕೆ ಸಿದ್ದ : ಡಿ.ಕೆ.ಶಿವಕುಮಾರ್

ಶುಕ್ರವಾರ, 18 ಆಗಸ್ಟ್ 2017 (13:17 IST)
ನನ್ನ ಮೇಲೆ ಯುದ್ಧ ಮಾಡುವವರ ವಿರುದ್ಧ ಯುದ್ಧಕ್ಕೆ ಸಿದ್ದವಾಗಿದ್ದೇನೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಸವಾಲ್ ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಏನೆಂದು ಬಿಜೆಪಿಯವರೇ ಸಾಬೀತುಪಡಿಸಬೇಕು. ನನ್ನ ಭ್ರಷ್ಟಾಚಾರವನ್ನು ಬಿಜೆಪಿಯವರೇ ಸಾಬೀತುಪಡಿಸಲಿ ಎಂದು ಗುಡುಗಿದ್ದಾರೆ.
 
ನನ್ನ ಮನೆಗಳ ಮೇಲೆ ದಾಳಿ ಮಾಡಿದ ಇಷ್ಟು ದಿನಗಳ ನಂತರ ಬಿಜೆಪಿ ನಾಯಕರು ನಿದ್ರೆಯಿಂದ ಎಚ್ಚೆತ್ತಿದ್ದಾರೆಯೇ ಎಂದು ಲೇವಡಿ ಮಾಡಿದ ಅವರು, ರಾಜಕೀಯದಲ್ಲಿ ಭ್ರಷ್ಟಾಚಾರ ತಂದವರೇ ಬಿಜೆಪಿಯವರು ಎಂದು ತಿರುಗೇಟು ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕತೆಯಿಂದ ಅಡಳಿತ ನಡೆಸುತ್ತಿರುವುದರಿಂದ ಬಿಜೆಪಿಯವರಿಗೆ ಆರೋಪ ಮಾಡಲು ಯಾವುದೇ ವಿಷಯಗಳಿಲ್ಲ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ ಎನ್ನುವ ಕಾರಣಕ್ಕೆ ಪ್ರತಿಭಟನೆ ನಡೆಸುತ್ತಿದ್ದಾರೆಯೇ ಹೊರತು ಬೇರೆ ಯಾವುದೇ ಕಾರಣಗಳಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ