ಬೆಂಗಳೂರು: 1941ರ ಬಳಿಕ ಇದೇ ಮೊದಲ ಬಾರಿಗೆ ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ 124 ಅಡಿ ತಲುಪಿದೆ. ಈ ಹಿನ್ನೆಲೆ ಮೈದುಂಬಿದ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗುವರು.
1941ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಜಲಾಶಯದಲ್ಲಿ ನೀರಿನ ಮಟ್ಟ 124 ಅಡಿ ತಲುಪಿದೆ. ಸಾಮಾನ್ಯವಾಗಿ ಜುಲೈ ತಿಂಗಳಾಂತ್ಯ ಅಥವಾ ಆಗಸ್ಟ್ನಲ್ಲಿ ಕೆಆರ್ಎಸ್ಗೆ ಬಾಗಿನ ಅರ್ಪಿಸಲಾಗುತ್ತದೆ. ಆದರೆ, ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯ ಜೂನ್ನಲ್ಲೇ ಭರ್ತಿಯಾಗಿದೆ.
ಉಳಿದ ಹಾಗೇ ಜಲಾಶಯದ ನೀರಿನ ಮಟ್ಟ ಜೂನ್ನಲ್ಲಿ ಸರಾಸರಿ 70-80 ಅಡಿ ಆಸುಪಾಸಿನಲ್ಲಿತ್ತು.