ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ

ಶುಕ್ರವಾರ, 31 ಮೇ 2019 (11:57 IST)
ಮಂಡ್ಯ : ಪ್ರಿಯಕರನೊಂದಿಗೆ ಸೇರಿ ಪತ್ನಿಯೊಬ್ಬಳು ಪತಿಯನ್ನು ಬರ್ಬರವಾಗಿ ಕೊಂದು ತಾನೇ ಪತಿ ಕಾಣೆಯಾದ ದೂರು ದಾಖಲಿಸಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.




ಸತೀಶ್ ಪತ್ನಿಯಿಂದ ಕೊಲೆಯಾದ ವ್ಯಕ್ತಿ. ತನ್ನ ಪ್ರಿಯಕರನ ಜೊತೆಗೆ ಸೇರಲು ಪತ್ನಿಗೆ ಪತಿ ತಡೆಯುತ್ತಿದ್ದ ಕಾರಣ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿ ಗ್ರಾಮದ ಹೊರವಲಯದಲ್ಲಿ ಮೃತದೇಹ ಹೂತು ಹಾಕಿದ್ದಾರೆ. ನಂತರ ಪತಿ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡುವ ನಾಟಕವಾಡಿದ್ದಾಳೆ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಪತ್ನಿ ಮೇಲೆ ಅನುಮಾನ ಬಂದಿದೆ. ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ವಿಚಾರಣೆ ನಡೆಸಿದಾಗ ಇಬ್ಬರು ಸತ್ಯಾಂಶ ಬಾಯ್ಬಿಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ