ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕ, ಆಂಧ್ರದಲ್ಲಿ ಭಾರಿ ಮಳೆ ಸಾಧ್ಯತೆ

ಶುಕ್ರವಾರ, 9 ಜೂನ್ 2017 (17:38 IST)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದರಿಂದ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸುಂದರ್ ಮೇತ್ರಿ ತಿಳಿಸಿದ್ದಾರೆ.
 
ವಾಯುಭಾರ ಕುಸಿತವಾಗಿದ್ದರಿಂದ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅಗತ್ಯವಾದ ಕಟ್ಟೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.
 
ಬೆಂಗಳೂರಲ್ಲಿ ಇಂದು ರಾತ್ರಿ ಮಳೆಯಾಗುವ ಸಾಧ್ಯತೆಗಳಿದ್ದು, ಬೀದರ್, ಕಲಬುರಗಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
 
ಕರ್ನಾಟಕದಲ್ಲಿ ಇಂದು ಮತ್ತು ನಾಳೆ, ಗಾಳಿ ಸಹಿತ ಭಾರಿ ಮಳೆ ಸುರಿಯಲಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಲಿದೆ ಎಂದು ನಿರ್ದೇಶಕ ಮೇತ್ರಿ ಮಾಹಿತಿ ನೀಡಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ