ಕಡಿಮೆ ಅಂಕ ಬಂತು ಅಂತ ನೇಣಿಗೆ ಶರಣಾದ ಯುವತಿ

ಮಂಗಳವಾರ, 16 ಏಪ್ರಿಲ್ 2019 (15:42 IST)
ಕಡಿಮೆ ಅಂಕ ಫಲಿತಾಂಶದಲ್ಲಿ ಬಂದಿದೆ ಅಂತ ದಾರವಾಡದ ಎಸ್ ಡಿ ಎಂ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿದ್ದಾಳೆ.

ಕಡಿಮೆ ಅಂಕ ಬಂದಿದ್ದಕ್ಕೆ ನೇಣು ಬಿಗಿದುಕ್ಕೊಂಡು ಆತ್ಮಹತ್ಯೆ ಮಾಡಿಕ್ಕೊಂಡ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದ್ವಿತೀಯ ಪಿ ಯು ಸಿ ಫಲಿತಾಂಶದಲ್ಲಿ ಅಂಕ ಕಡಿಮೆಯಾಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೂಡಲಗಿ ಪಟ್ಟಣದ ವಿದ್ಯಾರ್ಥಿನಿ ಐಶ್ವರ್ಯ ಬೆಳಕೋಡ (19) ಸಾವನ್ನಪ್ಪಿರುವ ವಿದ್ಯಾರ್ಥಿನಿಯಾಗಿದ್ದಾರೆ. ಈ ಕುರಿತು ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ