ಬಿಜೆಪಿಯ ಸಿಎಂ ರೇಸ್​ನಲ್ಲಿ 10 ಜನರಿದ್ದಾರೆ

ಶುಕ್ರವಾರ, 21 ಏಪ್ರಿಲ್ 2023 (18:40 IST)
ಬಿಜೆಪಿಯಲ್ಲಿ ಮುಖ್ಯಮಂತ್ರಿ ರೇಸ್​​ನಲ್ಲಿ ಹತ್ತಕ್ಕೂ ಹೆಚ್ಚು ಜನರಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಲೇವಡಿ ಮಾಡಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ C.T. ರವಿ, ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಸಿಎಂ ರೇಸ್​​​ನಲ್ಲಿದ್ದಾರೆ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಬೇರೆಯವರಿಗೆ ಖೆಡ್ಡಾ ತೋಡಲು ಹೋದವರೇ ಮೊದಲು ಖೆಡ್ಡಾಕ್ಕೆ ಬೀಳ್ತಾರೆ ಎಂದು ನಮ್ಮಲ್ಲಿ ಹಳೆ ಗಾದೆ ಮಾತಿದೆ. ಅದರಂತೆಯೇ ಬಿಜೆಪಿ ಕಥೆ ಆಗಲಿದೆ ಎಂದು ಲೇವಡಿ ಮಾಡಿದ್ರು. ಬೇರೆಯವರಿಗೆ ಖೆಡ್ಡಾ ತೋಡಲು ಷಡ್ಯಂತ್ರ ರೂಪಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ. ಆದ್ರೆ ಅವರ ಷಡ್ಯಂತ್ರಕ್ಕೆ ಅವರೇ ಬಲಿಯಾಗುತ್ತಾರೆ ಎಂದು ‌ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ