ಸಿಎಂ ಶಿಲಾನ್ಯಾಸ ನಡೆಸುತ್ತಿರುವ ಕಾಮಗಾರಿಗೆ ಹಣವೆಲ್ಲಿದೆ– ಬಿಎಸ್‌ವೈ ಪ್ರಶ್ನೆ

ಭಾನುವಾರ, 14 ಜನವರಿ 2018 (16:55 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ದಿವಾಳಿಯಾಗಿದ್ದು, ರಾಜ್ಯಾದ್ಯಂತ ಶಿಲಾನ್ಯಾಸ ನಡೆಸುತ್ತಿರುವ ಕಾಮಗಾರಿಗಳಿಗೆ ಹಣ ಎಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ  ಅವರು, ರಾಜ್ಯಾದ್ಯಂತ ಪ್ರವಾಸ ಮಾಡಿ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನಡೆಸುವ ಮೂಲಕ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
 
ಮುಂದಿನ ಬಜೆಟ್‌ನಲ್ಲಿ ಕೊಡುವ ಯೋಜನೆಗಳು ಸುಳ್ಳು ಎಂದಿರುವ ಯಡಿಯೂರಪ್ಪ ಮಹಾದಾಯಿ ವಿವಾದ ಕಾಂಗ್ರೆಸ್ ಪಕ್ಷದ ಪಾಪದ ಕೂಸು ಎಂದಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ