ಸಿಎಂ ಬದಲಾವಣೆ ಬರೀ ಗಾಳಿ ಸುದ್ದಿ: ಸಿದ್ದರಾಮಯ್ಯ

ಗುರುವಾರ, 28 ಏಪ್ರಿಲ್ 2016 (14:15 IST)
ಕಾಂಗ್ರೆಸ್ ಹೈಕಮಾಂಡ್‌ನಿಂದ ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಬರೀ ಗಾಳಿ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ನಮ್ಮ ವೈರಿಗಳು ಇಲ್ಲಸಲ್ಲದ ಗಾಳಿ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಮಾಧ್ಯಮಗಳ ವರದಿಗಾರರು ತಮಗೆ ಇಷ್ಟ ಬಂದ ರೀತಿಯಲ್ಲಿ ವರದಿಗೆ ರೆಕ್ಕೆಪುಕ್ಕಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
 
ಅಧಿಕಾರದ ಅವಧಿ ಪೂರ್ಣವಾಗುವವರೆಗೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ಹೈಕಮಾಂಡ್ ಸ್ಪಷ್ಟನೆ ನೀಡಿದೆ. ಆದ್ದರಿಂದ, ಇಂತಹ ಗಾಳಿ ಸುದ್ದಿಗಳಿಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
 
ವಿಪಕ್ಷಗಳು ಕಾಂಗ್ರೆಸ್ ಪಕ್ಷದ ಸರಕಾರದ ಸಾಧನೆಯನ್ನು ಸಹಿಸಲಾಗದೆ ಹೊಟ್ಟೆಕಿಚ್ಚಿನಿಂದ ಸರಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.
 
ಸರಕಾರ ರಾಜ್ಯ ಬರಗಾಲದಿಂದ ಮುಕ್ತವಾಗಲಿ ಎಂದು ಹರಸಾಹಸ ಪಡುತ್ತಿದ್ದರೆ ವಿಪಕ್ಷಗಳಿಗೆ ಮುಖ್ಯಮಂತ್ರಿ ಬದಲಾವಣೆಯ ಚಿಂತನೆ ಆವರಿಸಿದೆ. ವಿಪಕ್ಷಗಳು ಬರಪರಿಹಾರಕ್ಕಾಗಿ ಸರಕಾರದೊಂದಿಗೆ ಕೈ ಜೋಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.  
 

ವೆಬ್ದುನಿಯಾವನ್ನು ಓದಿ