ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ- ಬಿಕೆ ಹರಿಪ್ರಸಾದ್

ಸೋಮವಾರ, 15 ಮೇ 2023 (15:47 IST)
ಶಾಸಕರ ಅಭಿಪ್ರಾಯ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಬೆಂಗಳೂರಿನಲ್ಲಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ.ದೇಶಕ್ಕೆ ಮಾದರಿ ಆಡಳಿತ ನೀಡುವ ವ್ಯಕ್ತಿ ಹಾಗೂ ಪಕ್ಷವನ್ನ ಉಳಿಸುವವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಅಭಿಪ್ರಾಯ.ಹೈಕಮಾಂಡ್ ನನ್ನ ಅಭಿಪ್ರಾಯ ಕೇಳಿದರೆ ಹೇಳುತ್ತೇನೆ.ಸಿಎಲ್ ಪಿ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ತೆಗೆದುಕೊಂಡಿದ್ದೇವೆ.ಬಿಜೆಪಿಯವರಂತೆ ತಿಂಗಳುಗಳ ಕಾಲ ಸಿಎಂ ಆಯ್ಕೆ ಮಾಡದೆ ಇರುವ ಸಂಪ್ರದಾಯ ನಮ್ಮಲ್ಲಿ ಇಲ್ಲ.ಶಾಸಕರ ಅಭಿಪ್ರಾಯ ತೆಗೆದುಕೊಂಡು ಮುಖ್ಯಮಂತ್ರಿ ಮಾಡುವುದು ನಮ್ಮ ಸಂಪ್ರದಾಯ.ನಾಗಪುರದಿಂದ ಬಂದವರು ಸಿಎಂ ಆಯ್ಕೆ ಮಾಡುವ ಸಂಸ್ಕೃತಿ ನಮ್ಮಲ್ಲಿಲ್ಲ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ