ನಟರ ಮನೆಮೇಲೆ ಐಟಿ ದಾಳಿಗೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ- ಸಚಿವ ವೆಂಕಟರಾವ್ ನಾಡಗೌಡ

ಶನಿವಾರ, 5 ಜನವರಿ 2019 (12:46 IST)
ಕೊಪ್ಪಳ : ಸ್ಯಾಂಡಲ್‍ವುಡ್ ಸ್ಟಾರ್ ನಟರ ಮನೆಮೇಲೆ ಐಟಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್‍ವುಡ್ ಸ್ಟಾರ್ ನಟರ ಮನೆಮೇಲೆ ಐಟಿ ದಾಳಿಗೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಶುಸಂಗೋಪನಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಮೇಲೆ ಯಾಕೆ ಐಟಿ ದಾಳಿಯಾಗುತ್ತಿಲ್ಲ ಎಂಬುದನ್ನು ಮೋದಿಯವರ ಬಳಿಯೇ ಕೇಳಬೇಕು. ನನ್ನ ಕೇಳಿದ್ರೆ ಏನ್ ಹೇಳಲಿ. ಐಟಿ ಮುಂಚೆಯಿಂದಲೂ ಇದ್ದ ಇಲಾಖೆ. ಈಗ ಅದು ಮೋದಿಯವರ ಕೈಯಲ್ಲಿ ಬಹಳ ವ್ಯತಿರಿಕ್ತವಾಗಿ ಉಪಯೋಗವಾಗುತ್ತಿದೆ. ಈ ಮೂಲಕ ಏನೆಲ್ಲ ಮಾಡೋದಿಕೆ ಸಾಧ್ಯ ಇದೆಯೋ ಅವೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ


ಸಿನಿಮಾ ನಟರು ಹೆಚ್ಚೇನಲ್ಲ. ಬರೀ ರಾಜಕಾರಣಿಗಳ ಮೇಲಷ್ಟೇ ಐಟಿ ದಾಳಿಯಾಗಬೇಕಾ ಎಂದು ಪ್ರಶ್ನಿಸಿದ್ರು. ಸಿನಿಮಾ ನಟರು, ವಕೀಲರು, ವೈದ್ಯರ ಮೇಲೂ ಐಟಿ ದಾಳಿಯಾಗುತ್ತದೆ. ಯಾರು ಸಂಪತ್ತು ಜಾಸ್ತಿ ಗಳಿಸಿದ್ದಾರೆ ಅವರ ಮೇಲೆ ರೇಡ್ ಮಾಡುತ್ತಾರೆ. ಬಡವರ ಮೇಲೆ ದಾಳಿ ಮಾಡಕ್ಕಾಗುತ್ತಾ..? ರಾಜಕಾರಣಕ್ಕೂ ಐಟಿ ದಾಳಿಗೂ ಯಾವುದೇ ಸಂಬಂಧವಿಲ್ಲ. ಸಿನಿಮಾ ನಟರ ಮೇಲೆ ಯಾಕೆ ಪಾಪ ರಾಜಕಾರಣ ಮಾಡ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ