ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಭಾಷಣದಲ್ಲಿ ನೋವಿನ ಛಾಯೆ ಇಲ್ಲ, ಕೇವಲ ಸಿನಿಮಾ ಡೈಲಾಗಷ್ಟೇ-ಸುಮಲತಾ ವಿರುದ್ಧ ಸಿಎಂ ವಾಗ್ದಾಳಿ

ಗುರುವಾರ, 28 ಮಾರ್ಚ್ 2019 (10:01 IST)
ಮಂಡ್ಯ : ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಭಾಷಣ ಮಾಡಿದ ವಿಡಿಯೋವನ್ನು ನೋಡಿದರೆ ಅವರಲ್ಲಿ ಯಾವುದೇ ನೋವಿನ ಛಾಯೆ ಕಾಣುತ್ತಿಲ್ಲ. ಕೇವಲ ನಾಟಕೀಯ ಸಿನಿಮಾ ಡೈಲಾಗಷ್ಟೇ ಎಂದು ಸಿಎಂ ಕುಮಾರಸ್ವಾಮಿ ಅವರು ಸುಮಲತಾ  ಅವರ  ಹೆಸರನ್ನು ಪ್ರಸ್ತಾಪ ಮಾಡದೆಯೇ ವಾಗ್ದಾಳಿ ನಡೆಸಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಭಾಷಣ ಮಾಡಿದ ವಿಡಿಯೋವನ್ನು ಮಾಧ್ಯಮಗಳಲ್ಲಿ ತೋರಿಸಲಾಗಿದೆ. ಅದನ್ನು ನೋಡಿದರೆ ಅವರಲ್ಲಿ ಯಾವುದೇ ನೋವಿನ ಛಾಯೆ ಕಾಣುತ್ತಿಲ್ಲ. ಜಿಲ್ಲೆಯ ಜನರು ಅನುಭವಿಸುತ್ತಿರುವ ನೋವಿನ ಛಾಯೆಯು ಅವರ ಮುಖದಲ್ಲಿ ಇಲ್ಲ. ಕೇವಲ ನಾಟಕೀಯ ಸಿನಿಮಾ ಡೈಲಾಗಷ್ಟೇ ಎಂದು ಕಿಡಿಕಾರಿದ್ದಾರೆ.


ಅಲ್ಲದೇ ಹಣ ತಗೊಂಡು ಮಜಾ ಮಾಡಿ, ವೋಟ್ ಮಾತ್ರ ನನಗೆ ಹಾಕಿ ಹೇಳಿದ್ದಾರೆ. ಜಿಲ್ಲೆಯ ಜನರಿಗೆ ಅದನ್ನು ಸದುಪಯೋಗ ಪಡಿಸಿಕೊಳ್ಳಲಿ ಎಂದು ಹೇಳುತ್ತಿದ್ದಾರೆ. ಆದರೆ ರೈತರು ಆತ್ಮಹತ್ಯೆ ಮಾಡಿಕೊಂಡ ವೇಳೆ ನೊಂದ ಜನರಿಗೆ ನಾನು ಆರ್ಥಿಕ ಸಹಾಯ ಮಾಡಿದ್ದೇನೆ ವಿನಃ ಮಜಾ ಮಾಡಲು ದುಡ್ಡು ಕೊಟ್ಟಿಲ್ಲ. ಅವರ ಸಂಕಷ್ಟ ನೋಡಿ ಹಣ ಕೊಟ್ಟಿದ್ದೀನಿ. ಅವರು ಇನ್ನೊಬ್ಬರು ಹಣ ಪಡೆದು ಮಜಾ ಮಾಡಿಕೊಂಡು ಬರುವ ಸಂಸ್ಕೃತಿಯಿಂದ ಬಂದಿದ್ದಾರೆ ಎಂದು ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ